ಇತ್ತೀಚೆಗೆ ಚಾಯೋತ್ ನಲ್ಲಿ ಜರಗಿದ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದ್ದಾರೆ. ಸಂಸ್ಕೃತ ಪ್ರಭಾಷಣಂನಲ್ಲಿ ಒಂಬತ್ತನೇ ತರಗತಿಯ ಅನಿರುದ್ಧ ಕೆ.ಎನ್, ಹಿಂದಿ ಉಪನ್ಯಾಸ ರಚನೆಯಲ್ಲಿ ಹತ್ತನೇ ತರಗತಿಯ ಸುದರ್ಶನ. ಕೆ, ಸಂಸ್ಕೃತ ಸಮಸ್ಯಾಪೂರಣದಲ್ಲಿ ಹತ್ತನೇ ತರಗತಿಯ ಅನಿಕೇತ್ ಸುಬ್ರಾಯ ಭಟ್, ಸಂಸ್ಕೃತ ಪ್ರಶ್ನೋತ್ತರಿಯಲ್ಲಿ ಹತ್ತನೇ ತರಗತಿಯ ವರದರಾಜ ಕೆ.ಆರ್, ಕನ್ನಡ ಕಂಠಪಾಠ ಮತ್ತು ಸಂಸ್ಕೃತ ಗಾನಾಲಾಪನಂ ಸ್ಪರ್ಧೆಗಳಲ್ಲಿ ಒಂಬತ್ತನೇ ತರಗತಿಯ ಅನ್ವಿತಾ ಟಿ. ಪ್ರಥಮ ಸ್ಥಾನ ಗಳಿಸಿ ಜನವರಿಯಲ್ಲಿ ಕಲ್ಲಿಕೋಟೆಯಲ್ಲಿ ರಾಜ್ಯ ಕಲೋತ್ಸವದಲ್ಲಿ ಸ್ಪರ್ಧಿಸಲಿದ್ದಾರೆ. ಉತ್ತಮ ಸಾಧನೆ ಪ್ರದರ್ಶಿಸಿದ ಈ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
06 December 2022
26 November 2022
ಕುಂಬಳೆ ಶಾಲಾ ಕಲೋತ್ಸವ - ನಮ್ಮ ಶಾಲೆಗೆ ಚಾಂಪಿಯನ್ ಪಟ್ಟ
ಇತ್ತೀಚೆಗೆ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ವಿವಿಧ ವಿಭಾಗಗಳಲ್ಲಿ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಪ್ರೌಢಶಾಲಾ ಸಂಸ್ಕೃತೋತ್ಸವದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟ, ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತೋತ್ಸವದಲ್ಲಿ ರನ್ನರ್ಸ್ ಅಪ್, ಕಲೋತ್ಸವ ಪ್ರೌಢಶಾಲಾ ವಿಭಾಗದ ರನ್ನರ್ಸ್ ಅಪ್ ಪ್ರಶಸ್ತಿಯನ್ನು ನೀರ್ಚಾಲು ಶಾಲೆಯ ವಿದ್ಯಾರ್ಥಿಗಳು ಗಳಿಸಿದ್ದಾರೆ. ಈ ಮೂಲಕ ಕಲೋತ್ಸವದ ವಿವಿಧ ವಿಭಾಗಗಳಲ್ಲಿ ಮೂರು ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
21 October 2022
ನೀರ್ಚಾಲಿನಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ‘ಶಾಸ್ತ್ರೋತ್ಸವ’ ಆರಂಭ
“ಶತಮಾನಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಪ್ರಧಾನ ಸೇವೆ ಸಲ್ಲಿಸುತ್ತಿರುವ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗಳಲ್ಲಿ ಈ ಬಾರಿಯ ಕುಂಬಳೆ ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿರುವುದು ಸಂತೋಷದ ವಿಷಯ. ಕಳೆದ ಎರಡು ವರ್ಷಗಳಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿಗಳ ಚಟುವಟಿಕೆಗಳು ಈ ಮೂಲಕ ಗರಿಗೆದರುತ್ತಿರುವುದು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ನಾಂದಿಹಾಡಲಿದೆ. ಖಂಡಿಗೆ ಶಾಮ ಭಟ್ಟರಂತಹ ಮಹಾನುಭಾವರು ನಡೆದಾಡಿದ ನೆಲದಲ್ಲಿ ಈ ಪಠ್ಯೇತರ ಚಟುವಟಿಕೆಗಳ ಹಬ್ಬಕ್ಕೆ ಚಾಲನೆ ದೊರೆತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡಲಿದೆ ಎಂದು ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ಅಭಿಪ್ರಾಯಪಟ್ಟರು. ಅವರು 21.10.2022 ಶುಕ್ರವಾರ ಬೆಳಗ್ಗೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ ‘ಶಾಸ್ತ್ರೋತ್ಸವಂ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಶಾಂತಾ ಬಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯೆ ಶ್ರೀಮತಿ ಎಂ.ಶೈಲಜಾ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಅಬ್ಬಾಸ್ ಎಂ, ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯೆ ಶ್ರೀಮತಿ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಜಯಶ್ರೀ ಪಿ, ಕುಂಬಳೆ ಬಿಪಿಸಿ ಜಯರಾಮ್ ಜೆ, ಬದಿಯಡ್ಕ ಗ್ರಾಮ ಪಂಚಾಯತು ಪಿಇಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ, ಕುಂಬಳೆ ಉಪಜಿಲ್ಲಾ ಏಕ್ಟಿವಿಟಿ ಕಮಿಟಿಯ ಸಂಚಾಲಕ ಸುರೇಂದ್ರನ್ ಎಂ.ವಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲತಿ.ವೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಎಸ್.ನಾರಾಯಣ ಮತ್ತು ಮೋಹನ್ ಡಿ.ಎನ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಈಶ್ವರ ನಾಯಕ್, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಪ್ರಭಾರ ಪ್ರಾಂಶುಪಾಲ ಎಂ.ಸುಬ್ರಹ್ಮಣ್ಯನ್ ಉಪಸ್ಥಿತರಿದ್ದರು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ಧ್ವಜಾರೋಹಣಗೈದರು. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ಸ್ವಾಗತಿಸಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ ಧನ್ಯವಾದ ಸಮರ್ಪಿಸಿದರು. ಶಾಲಾ ಶಿಕ್ಷಕ ವಿಶ್ವನಾಥ ಭಟ್ ಕಾರ್ಯಕ್ರಮ ನಿರೂಪಿಸಿದರು.
ಅಕ್ಟೋಬರ್ 21 ರಂದು ಸಮಾಜ ವಿಜ್ಞಾನ, ಗಣಿತ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸ್ಪರ್ಧೆಗಳು ಮತ್ತು ಅಕ್ಟೋಬರ್ 22 ರಂದು ವಿಜ್ಞಾನ ಮತ್ತು ವೃತ್ತಿಪರಿಚಯಕ್ಕೆ ಸಂಬಂಧಿಸಿದ ಸ್ಪರ್ಧೆಗಳು ಜರಗಲಿವೆ. ಕಾರ್ಯಕ್ರಮದಲ್ಲಿ ಕುಂಬಳೆ ಉಪಜಿಲ್ಲೆಯ ವಿವಿಧ ಸರಕಾರಿ, ಅನುದಾನಿತ ಮತ್ತು ಅನನುದಾನಿತ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಸ್ಪರ್ಧೆಗಳು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಜರಗುತ್ತಿವೆ. ಕುಂಬಳೆ ಉಪಜಿಲ್ಲೆಯ 117 ಶಾಲೆಗಳಿಂದ 3146 ಮಂದಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.
14 October 2022
ನೀರ್ಚಾಲಿನಲ್ಲಿ ಅಕ್ಟೋಬರ್ 21,22 ರಂದು ಕುಂಬಳೆ ಉಪಜಿಲ್ಲಾ ಮಟ್ಟದ ‘ಶಾಸ್ತ್ರೋತ್ಸವ’
ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2022 ಅಕ್ಟೋಬರ್ 21 ಶುಕ್ರವಾರ ಮತ್ತು 22 ಶನಿವಾರಗಳಂದು ಕುಂಬಳೆ ಉಪಜಿಲ್ಲಾ ಮಟ್ಟದ ‘ಶಾಸ್ತ್ರೋತ್ಸವಂ’ ಜರಗಲಿದೆ. ಅಕ್ಟೋಬರ್ 21 ರಂದು ಸಮಾಜ ವಿಜ್ಞಾನ, ಗಣಿತ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸ್ಪರ್ಧೆಗಳು ಮತ್ತು ಅಕ್ಟೋಬರ್ 22 ರಂದು ವಿಜ್ಞಾನ ಮತ್ತು ವೃತ್ತಿಪರಿಚಯಕ್ಕೆ ಸಂಬಂಧಿಸಿದ ಸ್ಪರ್ಧೆಗಳು ಜರಗಲಿವೆ. ಕಾರ್ಯಕ್ರಮದಲ್ಲಿ ಕುಂಬಳೆ ಉಪಜಿಲ್ಲೆಯ ವಿವಿಧ ಸರಕಾರಿ, ಅನುದಾನಿತ ಮತ್ತು ಅನನುದಾನಿತ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಗಳು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಜರಗಲಿದೆ.
21.10.2022 ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ಧ್ವಜಾರೋಹಣಗೈಯಲಿದ್ದಾರೆ. ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಶಾಂತಾ ಬಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ನೆರವೇರಿಸಲಿದ್ದಾರೆ.
ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯೆ ಶ್ರೀಮತಿ ಎಂ.ಶೈಲಜಾ ಭಟ್, ಕಾಸರಗೋಡು ಕಂದಾಯ ಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಮತಿ ಪುಷ್ಪಾ ಕೆ.ವಿ, ಡಯಟ್ ಕಾಸರಗೋಡಿನ ಪ್ರಾಂಶುಪಾಲ ಕೆ.ರಘುರಾಮ ಭಟ್, ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಎನ್.ನಂದಿಕೇಶನ್, ‘ಕೈಟ್’ ಜಿಲ್ಲಾ ವ್ಯವಸ್ಥಾಪಕ ರಾಜೇಶ್ ಎಂ.ಪಿ, ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಅಬ್ಬಾಸ್ ಎಂ, ಬದಿಯಡ್ಕ ಗ್ರಾಮ ಪಂಚಾಯತು ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ರಶೀದಾ ಹಮೀದ್, ಕಾಸರಗೋಡು ಬ್ಲೋಕ್ ಪಂಚಾಯತು ಸದಸ್ಯೆ ಶ್ರೀಮತಿ ಜಯಂತಿ, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಜಯಶ್ರೀ ಪಿ, ಕುಂಬಳೆ ಬಿಪಿಸಿ ಜಯರಾಮ್ ಜೆ, ಬದಿಯಡ್ಕ ಗ್ರಾಮ ಪಂಚಾಯತು ಪಿಇಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ, ಕುಂಬಳೆ ಉಪಜಿಲ್ಲಾ ಏಕ್ಟಿವಿಟಿ ಕಮಿಟಿಯ ಸಂಚಾಲಕ ಸುರೇಂದ್ರನ್ ಎಂ.ವಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲತಿ.ವೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಎಸ್.ನಾರಾಯಣ ಮತ್ತು ಮೋಹನ್ ಡಿ.ಎನ್ ಕಾರ್ಯಕ್ರಮಕ್ಕೆ ಶುಭಹಾರೈಸಲಿದ್ದಾರೆ. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ಸ್ವಾಗತಿಸಿ, ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ ಧನ್ಯವಾದ ಸಮರ್ಪಿಸಲಿದ್ದಾರೆ.
22.10.2022 ಶನಿವಾರ ಅಪರಾಹ್ಣ 3 ಗಂಟೆಗೆ ಜರಗಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಯತೀಶ್ ಕುಮಾರ್ ರೈ ವಹಿಸಲಿದ್ದಾರೆ. ಬದಿಯಡ್ಕ ಪೋಲೀಸ್ ಇನ್ಸ್ಪೆಕ್ಟರ್ ಅಶ್ವಿತ್ ಎಸ್.ಕರಣ್ಮಯಿಲ್, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಮಾತೃ ವಿಭಾಗದ ಅಧ್ಯಕ್ಷರುಗಳಾದ ಗಿರಿಜಾ ಮತ್ತು ಸಿಂಧು ಟಿ ಬಹುಮಾನಗಳನ್ನು ವಿತರಿಸಲಿದ್ದಾರೆ. ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಪ್ರಭಾರ ಪ್ರಾಂಶುಪಾಲ ಎಂ.ಸುಬ್ರಹ್ಮಣ್ಯನ್ ಸ್ವಾಗತಿಸಿ, ಪ್ರೋಗ್ರಾಂ ಕಮಿಟಿಯ ಸಂಚಾಲಕ ಕೆ.ಗೋವಿಂದ ಶರ್ಮ ಧನ್ಯವಾದ ಸಮರ್ಪಿಸಲಿದ್ದಾರೆ.
ನೀವೆಲ್ಲರೂ ಬನ್ನಿ...
04 July 2022
ಮರು ಮೌಲ್ಯಮಾಪನ ಫಲಿತಾಂಶ
ಕೇರಳ ಸರಕಾರದ ವಿದ್ಯಾಭ್ಯಾಸ ಇಲಾಖೆಯು ಕಳೆದ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದ ಫಲಿತಾಂಶವು ಇದೀಗ ಪ್ರಕಟವಾಗಿದ್ದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ನಾಲ್ಕು ಮಂದಿ ವಿದ್ಯಾರ್ಥಿಗಳು ಉನ್ನತ ಗ್ರೇಡ್ ಪಡೆದು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದ ಹಿರಿಮೆಯನ್ನು ಸಾಧಿಸಿದ್ದಾರೆ. ಈ ಮೂಲಕ ಒಟ್ಟು 17 ಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದಂತಾಗಿದೆ. ಶ್ರೀಲಕ್ಷ್ಮಿ. ಕೆ, ಕಿಶನ್ ಕುಮಾರ್. ಜಿ, ಸಿದ್ಧಾರ್ಥ್. ಎಸ್ ಮತ್ತು ಶ್ರೀನಿವಾಸ ಶರ್ಮ.ಎನ್ ಇತ್ತೀಚೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಬಂದ ಸಂದರ್ಭದಲ್ಲಿ ಒಂಬತ್ತು ವಿಷಯಗಳಲ್ಲಿ ಮಾತ್ರ ಎ+ ಗ್ರೇಡ್ ಪಡೆದಿದ್ದರು. ಶುಭಾಶಯಗಳು...
15 June 2022
ನಮ್ಮ ಶಾಲೆಯ 13 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+
2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನಮ್ಮ ಶಾಲೆಯ 161 ಮಂದಿ ಪರೀಕ್ಷೆ ಬರೆದಿದ್ದು 161 ಮಂದಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿ ಶಾಲೆಗೆ 100% ಫಲಿತಾಂಶವನ್ನು ತಂದಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 13 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಈ ಶಾಲೆಯ ಅಚಲ ಪಿ, ಅನಘ ಟಿ, ಆಯಿಶತ್ ಅಲ್ಫೀನಾ ಎಂ ಬಿ, ಚರಿಷ್ಮಾ ಕೆ, ಧನುಶ್ ಕುಮಾರ್, ಕೃಪಾನಿಧಿ ಕೆ, ಮಧು ಸುಹನ್ ರೈ, ಮಿಥುನ್ರಾಜ್ ಪಿ, ಸಮಿಕ್ಷಾ ಡಿ ಶೆಟ್ಟಿ, ಸೌರಭ ಕೆ, ಶರತ್ ಎಸ್, ಸ್ಮಿತಾ ಕೆ, ತರುಣ್ ರೈ ಈ ಸಾಧನೆಯನ್ನು ಪ್ರದರ್ಶಿಸಿದ್ದಾರೆ. ಎಲ್ಲರಿಗೂ ಶುಭಾಶಯಗಳು...
21 February 2022
ನಮ್ಮ ಶಾಲೆಯ ಸ್ಕೌಟ್ಸ್ ಗಳಿಗೆ ರಾಜ್ಯಪುರಸ್ಕಾರ
ನಮ್ಮ ಶಾಲೆಯ ಗೈಡ್ಸ್ ಗಳಿಗೆ ರಾಜ್ಯಪುರಸ್ಕಾರ