ಕೇರಳ ಸರಕಾರದ ವಿದ್ಯಾಭ್ಯಾಸ ಇಲಾಖೆಯು ಕಳೆದ ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದ ಫಲಿತಾಂಶವು ಇದೀಗ ಪ್ರಕಟವಾಗಿದ್ದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ನಾಲ್ಕು ಮಂದಿ ವಿದ್ಯಾರ್ಥಿಗಳು ಉನ್ನತ ಗ್ರೇಡ್ ಪಡೆದು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದ ಹಿರಿಮೆಯನ್ನು ಸಾಧಿಸಿದ್ದಾರೆ. ಈ ಮೂಲಕ ಒಟ್ಟು 17 ಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದಂತಾಗಿದೆ. ಶ್ರೀಲಕ್ಷ್ಮಿ. ಕೆ, ಕಿಶನ್ ಕುಮಾರ್. ಜಿ, ಸಿದ್ಧಾರ್ಥ್. ಎಸ್ ಮತ್ತು ಶ್ರೀನಿವಾಸ ಶರ್ಮ.ಎನ್ ಇತ್ತೀಚೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಬಂದ ಸಂದರ್ಭದಲ್ಲಿ ಒಂಬತ್ತು ವಿಷಯಗಳಲ್ಲಿ ಮಾತ್ರ ಎ+ ಗ್ರೇಡ್ ಪಡೆದಿದ್ದರು. ಶುಭಾಶಯಗಳು...