ಕೇರಳ ಸರಕಾರವು ಮಾರ್ಚ್ 2013ರಲ್ಲಿ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆ 98% ಫಲಿತಾಂಶ ಪಡೆದಿದೆ. ಒಟ್ಟು ಪರೀಕ್ಷೆ ಬರೆದ 156 ಮಂದಿ ವಿದ್ಯಾರ್ಥಿಗಳಲ್ಲಿ 153 ಮಂದಿ ತೇರ್ಗಡೆಯಾಗಿದ್ದಾರೆ. ಈ ಪೈಕಿ ಆರು ಮಂದಿ ವಿದ್ಯಾರ್ಥಿಗಳು, ಅಂಕಿತಾ.ಪಿ, ಪೂರ್ಣಶ್ರೀ.ಡಿ, ಪ್ರಸೀದಾ.ಕೆ, ರೋಹಿಣಿ.ಕೆ, ಸುಶೀಲಾ.ಎಸ್ ಮತ್ತು ಶರತ್.ಕೆ ಎಲ್ಲಾ ಹತ್ತು ವಿಷಯಗಳಲ್ಲೂ ಎ+ ಗ್ರೇಡ್ ಪಡೆದಿದ್ದಾರೆ. ಎಲ್ಲರಿಗೂ ಶುಭಾಶಯಗಳು.
24 April 2013
27 March 2013
ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ಟರಿಗೆ ಬೀಳ್ಕೊಡುಗೆ
“ಸಂಸ್ಕೃತ ವಿದ್ವಾಂಸರಾಗಿ, ಶಾಲೆ ಮತ್ತು ವಿದ್ಯಾರ್ಥಿಗಳ ಉನ್ನತಿಗೆ ಕಾರಣರಾದ ಸಂಸ್ಕೃತ
ಶಿಕ್ಷಕ ಎಸ್.ವಿ.ಭಟ್ ಶಾಲೆಗೆ ಅನುಪಮ ಸೇವೆ ಸಲ್ಲಿಸಿದ್ದಾರೆ. ಶಾಲೆಯ ಕ್ರೀಡಾ
ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಹಿನ್ನೆಲೆಗಳಲ್ಲಿ ದುಡಿದ ಅವರು ಯುವಕರಿಗೆ
ಮಾರ್ಗದರ್ಶಿಯಾಗಿದ್ದಾರೆ. ಶಾಲೆಯ ಶತಮಾನೋತ್ಸವದ ಹೊಸ್ತಿಲಲ್ಲಿ ಅವರ ನಿವೃತ್ತಿ, ಶತಮಾನದ
ಆಚರಣೆಯಲ್ಲಿ ಅವರು ಪೂರ್ಣವಾಗಿ ತೊಡಗಿಸಿಕೊಳ್ಳಲು ಮುನ್ನುಡಿಯಾಗಲಿ” ಎಂದು ನಮ್ಮ ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ
ಸಂಸ್ಕೃತ ಶಿಕ್ಷಕ ಸುಬ್ರಹ್ಮಣ್ಯ ವೆಂಕಟ್ರಮಣ ಭಟ್ (ಎಸ್.ವಿ.ಭಟ್) ಇವರ ಬೀಳ್ಕೊಡುಗೆ
ಸಮಾರಂಭದಲ್ಲಿ ನಿವೃತ್ತರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಎ.ಭುವನೇಶ್ವರಿ, ಸಿ.ಎಚ್.ಸುಬ್ರಹ್ಮಣ್ಯ ಭಟ್, ಎಂ.ಸೂರ್ಯನಾರಾಯಣ, ಎಚ್.ಶಿವಕುಮಾರ, ವಾಣಿ.ಪಿ.ಎಸ್, ಇ.ವೇಣುಗೋಪಾಲಕೃಷ್ಣ, ಶಿವಪ್ರಕಾಶ್.ಎಂ.ಕೆ, ಚಂದ್ರಶೇಖರ ರೈ ಮತ್ತು ಗೋವಿಂದ ಶರ್ಮ.ಕೆ ಇವರು ಶುಭ ಹಾರೈಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕ ಕೆ.ನಾರಾಯಣ ಭಟ್ ವಂದಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಕೆ.ಶಂಕರನಾರಾಯಣ ಶರ್ಮ, ಎ.ಭುವನೇಶ್ವರಿ, ಸಿ.ಎಚ್.ಸುಬ್ರಹ್ಮಣ್ಯ ಭಟ್, ಎಂ.ಸೂರ್ಯನಾರಾಯಣ, ಎಚ್.ಶಿವಕುಮಾರ, ವಾಣಿ.ಪಿ.ಎಸ್, ಇ.ವೇಣುಗೋಪಾಲಕೃಷ್ಣ, ಶಿವಪ್ರಕಾಶ್.ಎಂ.ಕೆ, ಚಂದ್ರಶೇಖರ ರೈ ಮತ್ತು ಗೋವಿಂದ ಶರ್ಮ.ಕೆ ಇವರು ಶುಭ ಹಾರೈಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕ ಕೆ.ನಾರಾಯಣ ಭಟ್ ವಂದಿಸಿದರು.
26 March 2013
‘ಮಹಾಜನ’ರ ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ನಿವೃತ್ತಿ
ಕಳೆದ 28 ವರ್ಷಗಳಿಂದ ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯಲ್ಲಿ
ಸಂಸ್ಕೃತ ಶಿಕ್ಷಕರಾಗಿ ‘ಮಹಾಜನ’ರಿಗೆ ಸಂಸ್ಕೃತದ ಪಾಠಗಳನ್ನು ಹೇಳಿ ‘ಮಹಾಜನ’ರಾದ
ಸುಬ್ರಹ್ಮಣ್ಯ ವೆಂಕಟ್ರಮಣ ಭಟ್ (ಎಸ್.ವಿ.ಭಟ್) ಸರಕಾರೀ ಸೇವೆಯಿಂದ ಈ ತಿಂಗಳ ಕೊನೆಗೆ
ನಿವೃತ್ತಿ ಹೊಂದಲಿದ್ದಾರೆ. ನಾಳೆ ಈ ಅಧ್ಯಯನ ವರ್ಷದ ಕೊನೆಯ ದಿನವಾದ್ದರಿಂದ ನಾಳೆ ಶ್ರೀ ಎಸ್.ವಿ.ಭಟ್ಟರನ್ನು ಬೀಳ್ಕೊಡುವ ಸಮಾರಂಭ ಶಾಲೆಯಲ್ಲಿ ಜರಗಲಿದೆ. 1956 ದಶಂಬರ 11 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ
ಸನಿಹದ ಮೂರೂರಿನಲ್ಲಿ ವೆಂಕಟರಮಣ ಭಟ್ ಮತ್ತು ಗಂಗಾ ಇವರ ಪುತ್ರನಾಗಿ ಜನಿಸಿದ
ಎಸ್.ವಿ.ಭಟ್ ಶಿಕ್ಷಕನಾಗಿ ಕಾಸರಗೋಡಿನ ಕನ್ನಡಿಗರಿಗೆ ಅನುಪಮ ಸೇವೆ ಸಲ್ಲಿಸಿದ್ದಾರೆ.
1972ರಲ್ಲಿ ಎಸ್.ಎಸ್.ಎಲ್.ಸಿ, 1977ರಲ್ಲಿ ಪದವಿಯನ್ನು ಪಡೆದ ಎಸ್.ವಿ.ಭಟ್ಟರು ಮೈಸೂರು ವಿಶ್ವವಿದ್ಯಾನಿಲಯದಿಂದ 1981ರಲ್ಲಿ ಬಿ.ಎಡ್ ಪದವಿಯನ್ನು ಪಡೆದರು. ಬಳಿಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವನ್ನು ನಿರ್ವಹಿಸಿ ಕರಾವಳಿಯ ನಂಟನ್ನು ಹಿಡಿದು ಕಾಸರಗೋಡಿಗೆ ಆಗಮಿಸಿದ ಅವರು ಏತಡ್ಕದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1982 ಜನವರಿ 18 ರಂದು ಸಂಸ್ಕೃತ ಶಿಕ್ಷಕನಾಗಿ ಸೇವೆ ಆರಂಭಿಸಿದ್ದರು. ಸುತ್ತಲೂ ಹರಿಯುತ್ತಿದ್ದ ಹೊಳೆಗಳಿಂದಾಗಿ ‘ದ್ವೀಪ’ದಂತಿದ್ದ ಏತಡ್ಕದಲ್ಲಿನ ಜೀವನ ಅವರಿಗೆ ಅವಿಸ್ಮರಣೀಯ ಅನುಭವವನ್ನು ಕಟ್ಟಿಕೊಟ್ಟಿದೆ. “ಸನಿಹದ ಗೆಳೆಯರೊಂದಿಗೆ ಬಾಳೆದಂಡಿನ ತೆಪ್ಪವನ್ನು ಮಾಡಿ ಹೊಳೆಯಲ್ಲಿ ತೇಲಿಸಿ ಪ್ರಯೋಗ ಶೀಲರಾಗುತ್ತಿದ್ದ ನೆನಪು ಈಗಲೂ ಹಸಿಯಾಗಿದೆ, ಹಸಿರಾಗಿದೆ” ಎನ್ನುತ್ತಾರೆ ಎಸ್.ವಿ.ಭಟ್.
ಮುಂದೆ 1985 ಅಗೋಸ್ತು 6 ರಂದು ನೀರ್ಚಾಲು ಶಾಲೆ ಅವರನ್ನು ಕೈಬೀಸಿ ಕರೆಯಿತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಂಸ್ಕೃತ ಶಿಕ್ಷಕನಾಗಲು ಸಿಕ್ಕಿದ ಅವಕಾಶವನ್ನು ಅವರು ಕೈಚೆಲ್ಲದೆ ಉದ್ಯೋಗದಲ್ಲಿ ಭಡ್ತಿಯನ್ನು ಪಡೆದ ಅವರು ತಮ್ಮ ವಾಸ, ವೃತ್ತಿಯನ್ನು ನೀರ್ಚಾಲಿಗೆ ವರ್ಗಾಯಿಸಿಕೊಂಡರು. ಉದ್ಯೋಗ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ 1994ರಲ್ಲಿ ಸಂಸ್ಕೃತ ಸ್ನಾತಕೋತ್ತರ ಪದವಿಯನ್ನೂ ಅವರು ಪಡೆದಿದ್ದಾರೆ. “ಒಂದು ಕಾಲದಲ್ಲಿ ಪೂರ್ಣವಾಗಿ ಸಂಸ್ಕೃತದ ಶಿಕ್ಷಣದ ಕೇಂದ್ರವಾಗಿದ್ದ ಸಂಸ್ಥೆಯಲ್ಲಿ ಸಂಸ್ಕೃತದ ಶಿಕ್ಷಕನಾಗಲು ಅವಕಾಶ ದೊರೆತದ್ದು ನನ್ನ ಪಾಲಿನ ಸುಯೋಗ” ಎಂದು ಅವರು ನೆನಪಿಸಿಕೊಳ್ಳುತ್ತಾರೆ.
ನೀರ್ಚಾಲಿನ ವಿದ್ಯಾರ್ಥಿಗಳನ್ನು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಹುರಿದುಂಬಿಸಿದ ಅವರು ಶಾಲಾ ವಾರ್ಷಿಕೋತ್ಸವದ ಸಂದರ್ಭಗಳಲ್ಲಿ ನಾಟಕಗಳಲ್ಲೂ ಅಭಿನಯಿಸಿದ್ದರು. ಶಾಲಾ ಶಿಕ್ಷಕ ವೃಂದದ ಯಕ್ಷಗಾನ ತಾಳಮದ್ದಳೆಯ ತಂಡಗಳಲ್ಲಿ ಭಾಗವತರಾಗಿ, ಅರ್ಥಧಾರಿಯಾಗಿ ವಿವಿಧ ಪಾತ್ರಗಳನ್ನು ಸಮರ್ಪಕವಾಗಿ ಮಂಡಿಸಿದ್ದಾರೆ. ಪ್ರತೀ ವರ್ಷ ಶಾಲೆಯಲ್ಲಿ ಜರಗುವ ಶ್ರೀಶಾರದಾ ಪೂಜೆಯ ಸಂದರ್ಭದಲ್ಲಿ ಶ್ರೀದೇವಿಗೆ ಸಮರ್ಪಿಸುವ ‘ಅಷ್ಟಾವಧಾನ’ದ ಗೌರವವೂ ಇವರಿಗೆ ದೊರಕಿದೆ.
ಶಾಲಾ ಕಾರ್ಯಕ್ರಮಗಳಲ್ಲಿ ಮೈಕ್ ಜೋಡಿಸುವುದರಿಂದ ಆರಂಭಿಸಿ ಸಭಾ ಕಾರ್ಯಕ್ರಮದ ನಿರ್ವಹಣೆಯ ತನಕ ವಿವಿಧ ಜವಾಬ್ದಾರಿಗಳನ್ನು ಪೂರೈಸಿ ಕಿರಿಯರಿಗೆ ಮಾರ್ಗದರ್ಶನವೂ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಶಿಕ್ಷಕ ವೃಂದದ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳನ್ನು ಸಂಸ್ಕೃತ ತಾಳಮದ್ದಳೆಗಾಗಿ ತರಬೇತುಗೊಳಿಸಿ, ಮಂಗಳೂರು ಆಕಾಶವಾಣಿಯಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮವು ಪ್ರಸಾರವಾಗಲು ಎಸ್.ವಿ.ಭಟ್ ಕಾರಣೀಭೂತರಾಗಿದ್ದಾರೆ.
ಶಾಲಾ ಕಲೋತ್ಸವದ ‘ಸಂಸ್ಕೃತ’ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಕಠಿಣವಾಗುತ್ತಿದ್ದ ಅಷ್ಟಪದಿ, ಪಾಠಕಂ, ಚಂಪೂ ಪ್ರಭಾಷಣಂ ಇತ್ಯಾದಿಗಳ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಸರಳವಾಗಿ ನೀಡಿ ಅನೇಕ ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆಯುವಲ್ಲಿ ಎಸ್.ವಿ.ಭಟ್ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ. ಸಂಸ್ಕೃತ ಶಿಕ್ಷಕರಿಗಾಗಿ ನಡೆದ ವಿವಿಧ ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿಯೂ ಅವರು ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಕುಂಬಳೆ ಉಪಜಿಲ್ಲಾ ಮಟ್ಟದ ಕಲೋತ್ಸವ ಸ್ಪರ್ಧೆಗಳಲ್ಲಿ ಅನೇಕ ಬಾರಿ ನೀರ್ಚಾಲು ಶಾಲೆಯು ಸಮಗ್ರ ಪ್ರಶಸ್ತಿಯನ್ನು ಪಡೆದು, ಶಾಲೆಯ ಕೀರ್ತಿ ಪತಾಕೆಯು ಹಾರಾಡುತ್ತಿರುವಂತೆ ಅವರು ಗಮನಿಸಿದ್ದಾರೆ. ಆಧುನಿಕ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿ ವಿದ್ಯಾರ್ಥಿಗಳ ಚಟುವಟಿಕೆಯನ್ನು ಪ್ರತಿಬಿಂಬಿಸಲು ಪ್ರಪ್ರಥಮವಾಗಿ ಶಾಲೆಯೊಂದು ಆರಂಭಿಸಿದ ‘ಬ್ಲಾಗ್’ ಎಂಬ ಕೀರ್ತಿಗೆ ಪಾತ್ರವಾದ ನಮ್ಮ ‘ಮಹಾಜನ’ ಬ್ಲಾಗನ್ನು ಅವರು ಅಪಾರವಾಗಿ ಪ್ರೋತ್ಸಾಹಿಸಿದ್ದಾರೆ.
ಬಹುಮುಖಿ ವ್ಯಕ್ತಿತ್ವದ ಎಸ್.ವಿ.ಭಟ್ ಸಂಸ್ಕೃತ ಶಿಕ್ಷಕರಾಗಿ ವೃತ್ತಿಯಿಂದ ನಿರ್ಗಮಿಸುತ್ತಿದ್ದರೂ ಪ್ರವೃತ್ತಿಯಿಂದ ಮುಂದುವರಿಯಲಿದ್ದಾರೆ. ಪತ್ನಿ ಜಯಶ್ರೀ, ಪುತ್ರ ನವೀನ್ ಮತ್ತು ಪುತ್ರಿ ನಮೃತಾ ಜೊತೆ ಸಂತೃಪ್ತ ಜೀವನವನ್ನು ಸಾಗಿಸುತ್ತಿರುವ ಎಸ್.ವಿ.ಭಟ್ಟರ ನಿವೃತ್ತ ಜೀವನವು ಇನ್ನಷ್ಟು ಸುಖಮಯವಾಗಲಿ, ಶಾರದಾ ಮಾತೆಗೆ ಅವರು ಸಲ್ಲಿಸುತ್ತಿರುವ ಸೇವೆ ಮುಂದುವರಿಯಲಿ ಎಂದು ಅವರ ಶಿಷ್ಯವರ್ಗ, ಆಪ್ತವರ್ಗ ಹಾರೈಸುತ್ತಿದೆ.
1972ರಲ್ಲಿ ಎಸ್.ಎಸ್.ಎಲ್.ಸಿ, 1977ರಲ್ಲಿ ಪದವಿಯನ್ನು ಪಡೆದ ಎಸ್.ವಿ.ಭಟ್ಟರು ಮೈಸೂರು ವಿಶ್ವವಿದ್ಯಾನಿಲಯದಿಂದ 1981ರಲ್ಲಿ ಬಿ.ಎಡ್ ಪದವಿಯನ್ನು ಪಡೆದರು. ಬಳಿಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವನ್ನು ನಿರ್ವಹಿಸಿ ಕರಾವಳಿಯ ನಂಟನ್ನು ಹಿಡಿದು ಕಾಸರಗೋಡಿಗೆ ಆಗಮಿಸಿದ ಅವರು ಏತಡ್ಕದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1982 ಜನವರಿ 18 ರಂದು ಸಂಸ್ಕೃತ ಶಿಕ್ಷಕನಾಗಿ ಸೇವೆ ಆರಂಭಿಸಿದ್ದರು. ಸುತ್ತಲೂ ಹರಿಯುತ್ತಿದ್ದ ಹೊಳೆಗಳಿಂದಾಗಿ ‘ದ್ವೀಪ’ದಂತಿದ್ದ ಏತಡ್ಕದಲ್ಲಿನ ಜೀವನ ಅವರಿಗೆ ಅವಿಸ್ಮರಣೀಯ ಅನುಭವವನ್ನು ಕಟ್ಟಿಕೊಟ್ಟಿದೆ. “ಸನಿಹದ ಗೆಳೆಯರೊಂದಿಗೆ ಬಾಳೆದಂಡಿನ ತೆಪ್ಪವನ್ನು ಮಾಡಿ ಹೊಳೆಯಲ್ಲಿ ತೇಲಿಸಿ ಪ್ರಯೋಗ ಶೀಲರಾಗುತ್ತಿದ್ದ ನೆನಪು ಈಗಲೂ ಹಸಿಯಾಗಿದೆ, ಹಸಿರಾಗಿದೆ” ಎನ್ನುತ್ತಾರೆ ಎಸ್.ವಿ.ಭಟ್.
ಮುಂದೆ 1985 ಅಗೋಸ್ತು 6 ರಂದು ನೀರ್ಚಾಲು ಶಾಲೆ ಅವರನ್ನು ಕೈಬೀಸಿ ಕರೆಯಿತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಂಸ್ಕೃತ ಶಿಕ್ಷಕನಾಗಲು ಸಿಕ್ಕಿದ ಅವಕಾಶವನ್ನು ಅವರು ಕೈಚೆಲ್ಲದೆ ಉದ್ಯೋಗದಲ್ಲಿ ಭಡ್ತಿಯನ್ನು ಪಡೆದ ಅವರು ತಮ್ಮ ವಾಸ, ವೃತ್ತಿಯನ್ನು ನೀರ್ಚಾಲಿಗೆ ವರ್ಗಾಯಿಸಿಕೊಂಡರು. ಉದ್ಯೋಗ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ 1994ರಲ್ಲಿ ಸಂಸ್ಕೃತ ಸ್ನಾತಕೋತ್ತರ ಪದವಿಯನ್ನೂ ಅವರು ಪಡೆದಿದ್ದಾರೆ. “ಒಂದು ಕಾಲದಲ್ಲಿ ಪೂರ್ಣವಾಗಿ ಸಂಸ್ಕೃತದ ಶಿಕ್ಷಣದ ಕೇಂದ್ರವಾಗಿದ್ದ ಸಂಸ್ಥೆಯಲ್ಲಿ ಸಂಸ್ಕೃತದ ಶಿಕ್ಷಕನಾಗಲು ಅವಕಾಶ ದೊರೆತದ್ದು ನನ್ನ ಪಾಲಿನ ಸುಯೋಗ” ಎಂದು ಅವರು ನೆನಪಿಸಿಕೊಳ್ಳುತ್ತಾರೆ.
ನೀರ್ಚಾಲಿನ ವಿದ್ಯಾರ್ಥಿಗಳನ್ನು ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಹುರಿದುಂಬಿಸಿದ ಅವರು ಶಾಲಾ ವಾರ್ಷಿಕೋತ್ಸವದ ಸಂದರ್ಭಗಳಲ್ಲಿ ನಾಟಕಗಳಲ್ಲೂ ಅಭಿನಯಿಸಿದ್ದರು. ಶಾಲಾ ಶಿಕ್ಷಕ ವೃಂದದ ಯಕ್ಷಗಾನ ತಾಳಮದ್ದಳೆಯ ತಂಡಗಳಲ್ಲಿ ಭಾಗವತರಾಗಿ, ಅರ್ಥಧಾರಿಯಾಗಿ ವಿವಿಧ ಪಾತ್ರಗಳನ್ನು ಸಮರ್ಪಕವಾಗಿ ಮಂಡಿಸಿದ್ದಾರೆ. ಪ್ರತೀ ವರ್ಷ ಶಾಲೆಯಲ್ಲಿ ಜರಗುವ ಶ್ರೀಶಾರದಾ ಪೂಜೆಯ ಸಂದರ್ಭದಲ್ಲಿ ಶ್ರೀದೇವಿಗೆ ಸಮರ್ಪಿಸುವ ‘ಅಷ್ಟಾವಧಾನ’ದ ಗೌರವವೂ ಇವರಿಗೆ ದೊರಕಿದೆ.
ಶಾಲಾ ಕಾರ್ಯಕ್ರಮಗಳಲ್ಲಿ ಮೈಕ್ ಜೋಡಿಸುವುದರಿಂದ ಆರಂಭಿಸಿ ಸಭಾ ಕಾರ್ಯಕ್ರಮದ ನಿರ್ವಹಣೆಯ ತನಕ ವಿವಿಧ ಜವಾಬ್ದಾರಿಗಳನ್ನು ಪೂರೈಸಿ ಕಿರಿಯರಿಗೆ ಮಾರ್ಗದರ್ಶನವೂ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಶಿಕ್ಷಕ ವೃಂದದ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳನ್ನು ಸಂಸ್ಕೃತ ತಾಳಮದ್ದಳೆಗಾಗಿ ತರಬೇತುಗೊಳಿಸಿ, ಮಂಗಳೂರು ಆಕಾಶವಾಣಿಯಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮವು ಪ್ರಸಾರವಾಗಲು ಎಸ್.ವಿ.ಭಟ್ ಕಾರಣೀಭೂತರಾಗಿದ್ದಾರೆ.
ಶಾಲಾ ಕಲೋತ್ಸವದ ‘ಸಂಸ್ಕೃತ’ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಕಠಿಣವಾಗುತ್ತಿದ್ದ ಅಷ್ಟಪದಿ, ಪಾಠಕಂ, ಚಂಪೂ ಪ್ರಭಾಷಣಂ ಇತ್ಯಾದಿಗಳ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಸರಳವಾಗಿ ನೀಡಿ ಅನೇಕ ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆಯುವಲ್ಲಿ ಎಸ್.ವಿ.ಭಟ್ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ. ಸಂಸ್ಕೃತ ಶಿಕ್ಷಕರಿಗಾಗಿ ನಡೆದ ವಿವಿಧ ತರಬೇತಿಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿಯೂ ಅವರು ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಕುಂಬಳೆ ಉಪಜಿಲ್ಲಾ ಮಟ್ಟದ ಕಲೋತ್ಸವ ಸ್ಪರ್ಧೆಗಳಲ್ಲಿ ಅನೇಕ ಬಾರಿ ನೀರ್ಚಾಲು ಶಾಲೆಯು ಸಮಗ್ರ ಪ್ರಶಸ್ತಿಯನ್ನು ಪಡೆದು, ಶಾಲೆಯ ಕೀರ್ತಿ ಪತಾಕೆಯು ಹಾರಾಡುತ್ತಿರುವಂತೆ ಅವರು ಗಮನಿಸಿದ್ದಾರೆ. ಆಧುನಿಕ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿ ವಿದ್ಯಾರ್ಥಿಗಳ ಚಟುವಟಿಕೆಯನ್ನು ಪ್ರತಿಬಿಂಬಿಸಲು ಪ್ರಪ್ರಥಮವಾಗಿ ಶಾಲೆಯೊಂದು ಆರಂಭಿಸಿದ ‘ಬ್ಲಾಗ್’ ಎಂಬ ಕೀರ್ತಿಗೆ ಪಾತ್ರವಾದ ನಮ್ಮ ‘ಮಹಾಜನ’ ಬ್ಲಾಗನ್ನು ಅವರು ಅಪಾರವಾಗಿ ಪ್ರೋತ್ಸಾಹಿಸಿದ್ದಾರೆ.
ಬಹುಮುಖಿ ವ್ಯಕ್ತಿತ್ವದ ಎಸ್.ವಿ.ಭಟ್ ಸಂಸ್ಕೃತ ಶಿಕ್ಷಕರಾಗಿ ವೃತ್ತಿಯಿಂದ ನಿರ್ಗಮಿಸುತ್ತಿದ್ದರೂ ಪ್ರವೃತ್ತಿಯಿಂದ ಮುಂದುವರಿಯಲಿದ್ದಾರೆ. ಪತ್ನಿ ಜಯಶ್ರೀ, ಪುತ್ರ ನವೀನ್ ಮತ್ತು ಪುತ್ರಿ ನಮೃತಾ ಜೊತೆ ಸಂತೃಪ್ತ ಜೀವನವನ್ನು ಸಾಗಿಸುತ್ತಿರುವ ಎಸ್.ವಿ.ಭಟ್ಟರ ನಿವೃತ್ತ ಜೀವನವು ಇನ್ನಷ್ಟು ಸುಖಮಯವಾಗಲಿ, ಶಾರದಾ ಮಾತೆಗೆ ಅವರು ಸಲ್ಲಿಸುತ್ತಿರುವ ಸೇವೆ ಮುಂದುವರಿಯಲಿ ಎಂದು ಅವರ ಶಿಷ್ಯವರ್ಗ, ಆಪ್ತವರ್ಗ ಹಾರೈಸುತ್ತಿದೆ.
11 March 2013
SSLC ಪರೀಕ್ಷೆ ಇಂದು ಆರಂಭ.
ನಮ್ಮ ಶಾಲೆಯ 156 ಮಂದಿ ವಿದ್ಯಾರ್ಥಿಗಳು ಇಂದಿನಿಂದ SSLC ಪರೀಕ್ಷೆ ಬರೆಯಲು ಆರಂಭಿಸಿದ್ದಾರೆ. ಈಗಾಗಲೇ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪರೀಕ್ಷೆಗಳು ಮುಗಿದಿರುವುದರಿಂದ ಇನ್ನು ಉಳಿದಿರುವುದು ಒಟ್ಟು 9 ಪರೀಕ್ಷೆಗಳು. 21 ಗುರುವಾರ ಕೊನೆಯ ದಿನ. ಎಲ್ಲ ಪರೀಕ್ಷೆಗಳೂ ಅಪರಾಹ್ನ ಜರಗುತ್ತವೆ. ಇಂಗ್ಲಿಷ್, ಸಮಾಜ ವಿಜ್ಞಾನ ಮತ್ತು ಗಣಿತ ಎರಡೂವರೆ ಗಂಟೆ ಅವಧಿಯ ಪರೀಕ್ಷೆಗಳು. ಉಳಿದ ಎಲ್ಲ ಪರೀಕ್ಷೆಗಳು ಕೇವಲ ಒಂದೂವರೆ ಘಂಟೆ. ಎಲ್ಲ ಪರೀಕ್ಷೆಗಳ ಆರಂಭದ 15 ನಿಮಿಷ ಪ್ರಶ್ನೆ ಪತ್ರಿಕೆಯನ್ನು ಕೂಲಂಕಶವಾಗಿ ಪರಿಶೀಲಿಸಲು ‘ಕೂಲ್ ಓಫ್ ಟೈಮ್’ ಆಗಿ ನಿಡಲಾಗಿದೆ. ವಿದ್ಯಾರ್ಥಿಗಳು ಚೆನ್ನಾಗಿ ಬರೆಯುತ್ತಾರೆ ಎಂಬ ವಿಶ್ವಾಸ ನಮ್ಮದು. ಶುಭಾಶಯಗಳು ಅವರಿಗೆ...
04 March 2013
ವಿದ್ಯಾಭಿಮಾನಿಗಳು ಕೈಜೋಡಿಸಿದರೆ ಶತಮಾನೋತ್ಸವ ಯಶಸ್ವಿ : ಐ.ವಿ.ಭಟ್
“ಮಹಾಜನ ವಿದ್ಯಾಸಂಸ್ಥೆಗಳ ಶತಮಾನೋತ್ಸವವು ವಿಜೃಂಭಣೆಯಿಂದ ನಡೆಯಲಿ. ಎಲ್ಲಾ ಸಮಿತಿಗಳೂ ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದಲ್ಲಿ ಕಾರ್ಯಕ್ರಮ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ. ದೂರದ ಊರುಗಳಲ್ಲಿರುವ ಹಳೆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರನ್ನೂ ಈ ಕಾರ್ಯಕ್ರಮದಲ್ಲಿ ಸರ್ವ ರೀತಿಯಲ್ಲಿ ಸೇರಿಸಿಕೊಂಡು ಮುನ್ನಡೆಯಬೇಕಾದುದು ಅಗತ್ಯ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಐ.ವಿ.ಭಟ್ ಅಭಿಪ್ರಾಯಪಟ್ಟರು. ಅವರು ನಿನ್ನೆ ಶಾಲೆಯಲ್ಲಿ ಜರಗಿದ ನಮ್ಮ ವಿದ್ಯಾಸಂಸ್ಥೆಗಳ ಶತಮಾನೋತ್ಸವ ಆಚರಣೆಯ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಪ್ರಾಸ್ತಾವಿಕ ಭಾಷಣ ಮಾಡಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕರುಣಾಕರ ಅನಂತಪುರ ಶುಭ ಹಾರೈಸಿದರು. ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಮಂಜುನಾಥ ಮಾನ್ಯ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ. ನಟರಾಜ ರಾವ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಉಪಸ್ಥಿತರಿದ್ದರು. ಶತಮನೋತ್ಸವದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ಈ ಸಂದರ್ಭದಲ್ಲಿ ರೂಪೀಕರಿಸಲಾಯಿತು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ವಂದಿಸಿದರು. ನಿವೃತ್ತ ಚಿತ್ರಕಲಾ ಶಿಕ್ಷಕ ಬಾಲ ಮಧುರಕಾನನ ಕಾರ್ಯಕ್ರಮ ನಿರೂಪಿಸಿದರು.
ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಪ್ರಾಸ್ತಾವಿಕ ಭಾಷಣ ಮಾಡಿದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕರುಣಾಕರ ಅನಂತಪುರ ಶುಭ ಹಾರೈಸಿದರು. ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಮಂಜುನಾಥ ಮಾನ್ಯ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ. ನಟರಾಜ ರಾವ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಉಪಸ್ಥಿತರಿದ್ದರು. ಶತಮನೋತ್ಸವದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ಈ ಸಂದರ್ಭದಲ್ಲಿ ರೂಪೀಕರಿಸಲಾಯಿತು.
ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ವಂದಿಸಿದರು. ನಿವೃತ್ತ ಚಿತ್ರಕಲಾ ಶಿಕ್ಷಕ ಬಾಲ ಮಧುರಕಾನನ ಕಾರ್ಯಕ್ರಮ ನಿರೂಪಿಸಿದರು.
28 February 2013
14 February 2013
ಶತಮಾನೋತ್ಸವ ಯಶಸ್ವಿಯಾಗಲಿ: ಪಡಿಯಡ್ಪು ಶಂಕರ ಭಟ್
“ಪೆರಡಾಲದಲ್ಲಿ ಹುಟ್ಟಿ, ನೀರ್ಚಾಲಿನಲ್ಲಿ ಬೆಳೆದು ಹಳ್ಳಿ ಪ್ರದೇಶವಾದ ಈ
ನಾಡಿನಲ್ಲಿ ಸಹಸ್ರಾರು ಮಂದಿಗೆ ವಿದ್ಯಾದಾನ ನೀಡಿ ಪರಮ ಪಾವನವಾದ ಮಹಾಜನ
ವಿದ್ಯಾಸಂಸ್ಥೆಗಳು ಪ್ರಸ್ತುತ ಶತಮಾನೋತ್ಸವ ಆಚರಣೆಯ ಹೊಸ್ತಿಲಿನಲ್ಲಿದೆ. ಈ ವರ್ಷದ
ಕೊನೆಗೆ ನಡೆಯುವ ಈ ಸಮಾರಂಭವು ಕ್ರಿಯಾತ್ಮಕ ಪರಿಣಾಮಗಳನ್ನು ನೀಡಿ ಯಶಸ್ವಿಯಾಗಲಿ ಎಂದು
ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಅಭಿಪ್ರಾಯಪಟ್ಟರು. ಅವರು 10.02.2013
ಆದಿತ್ಯವಾರ ನೀರ್ಚಾಲಿನಲ್ಲಿ ಜರಗಿದ ನಮ್ಮ ಶಾಲೆಗಳ ಶತಮಾನೋತ್ಸವ ಆಚರಣೆಯ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ
ಮಾತನಾಡುತ್ತಿದ್ದರು.
ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಕೆ.ಎನ್.ಕೃಷ್ಣ ಭಟ್, ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಶುಭ ಹಾರೈಸಿದರು. ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಮಂಜುನಾಥ ಮಾನ್ಯ, ನಿವೃತ್ತ ಶಿಕ್ಷಕ ಕುಂಜಾರು ಸುಬ್ರಾಯ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಉಪಸ್ಥಿತರಿದ್ದರು. ಸಮಿತಿಯ ಮುಂದಿನ ಸಭೆಯನ್ನು ಮಾರ್ಚ್ ೩ ರಂದು ಶಾಲಾ ಪರಿಸರದಲ್ಲಿ ನಡೆಸಲಾಗುವುದು.
ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಚ್. ಶಿವಕುಮಾರ ಕಾರ್ಯಕ್ರಮ ನಿರ್ವಹಿಸಿದರು.
ಮಹಾಜನ ವಿದ್ಯಾಭಿವರ್ಧಕ ಸಂಘದ ಅಧ್ಯಕ್ಷ ಡಾ| ಸುಬ್ರಹ್ಮಣ್ಯ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಕೆ.ಎನ್.ಕೃಷ್ಣ ಭಟ್, ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಶುಭ ಹಾರೈಸಿದರು. ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್, ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಮಂಜುನಾಥ ಮಾನ್ಯ, ನಿವೃತ್ತ ಶಿಕ್ಷಕ ಕುಂಜಾರು ಸುಬ್ರಾಯ, ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಉಪಸ್ಥಿತರಿದ್ದರು. ಸಮಿತಿಯ ಮುಂದಿನ ಸಭೆಯನ್ನು ಮಾರ್ಚ್ ೩ ರಂದು ಶಾಲಾ ಪರಿಸರದಲ್ಲಿ ನಡೆಸಲಾಗುವುದು.
ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಚ್. ಶಿವಕುಮಾರ ಕಾರ್ಯಕ್ರಮ ನಿರ್ವಹಿಸಿದರು.
06 February 2013
ಶತಮಾನೋತ್ಸವ ಸಿದ್ಧತಾ ಸಭೆ
ಶತಮಾನಗಳಿಂದ ವಿದ್ಯಾದಾನಗೈಯುತ್ತಿರುವ ನೀರ್ಚಾಲಿನ ಮಹಾಜನ ಸಂಸ್ಕೃತ
ಕಾಲೇಜು ಪ್ರೌಢಶಾಲೆಯ ಶತಮಾನೋತ್ಸವವನ್ನು ಆಚರಿಸುವ ನಿಮಿತ್ತ ಶಾಲಾ ಹಳೆ
ವಿದ್ಯಾರ್ಥಿಗಳ, ವಿದ್ಯಾಭಿಮಾನಿಗಳ ಸಭೆಯನ್ನು ದಿನಾಂಕ 10.02.2013 ಆದಿತ್ಯವಾರ
ಬೆಳಗ್ಗೆ 10 ಗಂಟೆಗೆ ಶಾಲಾ ಪರಿಸರದಲ್ಲಿ ಕರೆಯಲಾಗಿದೆ. ಎಲ್ಲ ಹಿತೈಷಿಗಳು ಕ್ಲಪ್ತ
ಸಮಯದಲ್ಲಿ ಹಾಜರಿದ್ದು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಶತಮಾನೋತ್ಸವದ ಆಚರಣೆಯನ್ನು
ಸಾರ್ಥಕಗೊಳಿಸಬೇಕೆಂದು ಮಹಾಜನ ವಿದ್ಯಾಭಿವರ್ಧಕ ಸಂಘ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ
ಪದಾಧಿಕಾರಿಗಳು ತಿಳಿಸಿದ್ದಾರೆ.

28 January 2013
“ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಅಗತ್ಯ” : ಎಸ್.ಆರ್.ಶೇಟ್
“ನೈತಿಕ ಶಿಕ್ಷಣದ ಅನಿವಾರ್ಯತೆ ವಿದ್ಯಾರ್ಥಿ ಸಮಾಜದಲ್ಲಿ ಅಧಿಕವಾಗುತ್ತಿದೆ. ‘ಅತಿ’ ಎಂಬುದು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಆರಂಭಿಸಿದೆ. ಇಂಟರ್ನೆಟ್ ಮತ್ತಿತರ ಸಮೂಹ ಮಾಧ್ಯಮಗಳ ಅತಿಯಾದ ಬಳಕೆಯಿಂದಾಗಿ ವಿದ್ಯಾರ್ಥಿಗಳು ಹಾದಿ ತಪ್ಪುವ ಅವಕಾಶಗಳು ಅಧಿಕವಾಗಲಾರಂಭಿಸಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲಿ ಸರಕಾರ ರೂಪಿಸುವ ವಾರ್ಷಿಕ ಚಟುವಟಿಕೆಯಲ್ಲಿ ಈ ಬಗ್ಗೆ ಸ್ಪಷ್ಟ ಕಲ್ಪನೆಗಳನ್ನು ಅಳವಡಿಸಿಕೊಳ್ಳಬೇಕಾಗಿದೆ.”ಎಂದು ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ಎಸ್.ಆರ್.ಶೇಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ವರ್ಧಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್, ಕಾರ್ಯಕಾರಿ ಸಮಿತಿ ಸದಸ್ಯ ಮಹಾಲಿಂಗ ಪಾಟಾಳಿ, ಮಹಾಜನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ಶುಭಹಾರೈಸಿದರು.
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವಿಕೃಷ್ಣ. ಯು ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಶಾರೀರಿಕ ಶಿಕ್ಷಣ ಅಧ್ಯಾಪಕ ಎಂ.ಸೂರ್ಯನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು. ಬೆಳಗ್ಗೆ ಮಹಾಜನ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆಯೂ ಜರಗಿತು.
ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್, ಕಾರ್ಯಕಾರಿ ಸಮಿತಿ ಸದಸ್ಯ ಮಹಾಲಿಂಗ ಪಾಟಾಳಿ, ಮಹಾಜನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿ. ಮಹಾಲಿಂಗ ಭಟ್ ಶುಭಹಾರೈಸಿದರು.
ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವಿಕೃಷ್ಣ. ಯು ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಶಾರೀರಿಕ ಶಿಕ್ಷಣ ಅಧ್ಯಾಪಕ ಎಂ.ಸೂರ್ಯನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು. ಬೆಳಗ್ಗೆ ಮಹಾಜನ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆಯೂ ಜರಗಿತು.
18 January 2013
ಜನವರಿ 28ರಂದು ಶಾಲಾ ವಾರ್ಷಿಕೋತ್ಸವ
ವರ್ಷಂಪ್ರತಿ ನಡೆಯುವಂತೆ ಶಾಲಾ ವಾರ್ಷಿಕೋತ್ಸವವು ಜನವರಿ 28, 2013 ರಂದು ನಮ್ಮ ಶಾಲೆಯಲ್ಲಿ ನಡೆಯಲಿದೆ. ನೆರೆಯ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ಶ್ರೀ ಎಸ್. ಆರ್. ಶೇಟ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ವಾರ್ಷಿಕೋತ್ಸವದ ಅಂಗವಾಗಿ ಅದೇ ದಿನ ಬೆಳಗ್ಗೆ ಶಾಲಾ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶವೂ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಪ್ರಸ್ತುತ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಜರಗುತ್ತಿವೆ.
ರಾಜ್ಯ ಮಟ್ಟದ ಕಲೋತ್ಸವದಲ್ಲಿ...
ನಮ್ಮ ಶಾಲೆಯ ವಿದ್ಯಾರ್ಥಿಗಳು ಈ ಬಾರಿ ಕಲೋತ್ಸವದಲ್ಲಿ ರಾಜ್ಯ ಮಟ್ಟದ ತನಕ ಬೆಳೆದಿದ್ದಾರೆ. ಕೇರಳದ ಮಧ್ಯಭಾಗ ಮಲಪ್ಪುರಂನಲ್ಲಿ ನಡೆಯುತ್ತಿರುವ 53ನೇ ರಾಜ್ಯ ಮಟ್ಟದ ಕಲೋತ್ಸವದಲ್ಲಿ ಭಾಗವಹಿಸಲು ನಮ್ಮ ಶಾಲೆಯ ಒಂಬತ್ತು ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇವುಗಳಲ್ಲಿ ಮೊನ್ನೆ 16ರಂದು ಜರಗಿದ ವಂದೇಮಾತರಂ ಗಾಯನದಲ್ಲಿ ಹತ್ತನೇ ತರಗತಿಯ ಸುಶೀಲಾ. ಎಸ್, ಅಂಕಿತಾ. ಪಿ, ಚೈತ್ರಾ. ಎನ್, ಇಶಿಕಾ, ಒಂಭತ್ತನೇ ತರಗತಿಯ ಭಾಗ್ಯಶ್ರೀ. ಕೆ. ಎಸ್, ಅಶ್ವಿನಿ. ಕೆ ಹಾಗೂ ರಮ್ಯಶ್ರೀ ಇವರ ತಂಡ ‘ಎ’ ಗ್ರೇಡ್ ಪಡೆದಿದೆ. ನಿನ್ನೆ ಜರಗಿದ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಭಾಗ್ಯಶ್ರೀ ಕೆ. ಎಸ್ ‘ಬಿ’ ಗ್ರೇಡ್ ಪಡೆದಿದ್ದಾಳೆ. ಒಂಭತ್ತನೇ ತರಗತಿಯ ಶ್ರದ್ಧಾ. ಎಸ್ ಭಾಗವಹಿಸುವ ಮಿಮಿಕ್ರಿ ಸ್ಪರ್ಧೆ ನಾಡಿದ್ದು ಭಾನುವಾರ, ಅಂದರೆ ಕಲೋತ್ಸವದ ಕೊನೆಯ ದಿನ ಒಂದನೇ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು.
14 December 2012
12 December 2012
ದಶಂಬರ ಬಂತೆಂದರೆ ಶಾಲಾ ವಿದ್ಯಾರ್ಥಿಗಳಿಗೆ ಎರಡು ಅಬ್ಬರಗಳು. ಮೊದಲನೆಯದು ಕಲೋತ್ಸವ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗುವ ಕಲೋತ್ಸವ ಸ್ಪರ್ಧೆಗಳು ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ಈ ತಿಂಗಳ ಆರಂಭದಲ್ಲಿ ನಡೆದವು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಸ್ಪರ್ಧೆಗಳಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳೂ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಸಂಸ್ಕೃತೋತ್ಸವದ ಪ್ರೌಢಶಾಲಾ ಮತ್ತು ಯುಪಿ ವಿಭಾಗದ ಸ್ಪರ್ಧೆಗಳಲ್ಲಿ ಅತ್ಯಧಿಕ ಅಂಕ ಪಡೆದು ಸಂಸ್ಕೃತೋತ್ಸವದ ಸಮಗ್ರ ಪ್ರಶಸ್ತಿಯನ್ನು ಶಾಲೆಗೆ ತಂದಿದ್ದಾರೆ. ಅವರಿಗೆ ಶುಭಾಶಯಗಳು.
ನಾಳೆಯಿಂದ ಮಧ್ಯಾವಧಿ ಪರೀಕ್ಷೆಗಳು ಆರಂಭ. ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಅವರಿಗೂ ಶುಭಾಶಯಗಳು.
ನಾಳೆಯಿಂದ ಮಧ್ಯಾವಧಿ ಪರೀಕ್ಷೆಗಳು ಆರಂಭ. ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಅವರಿಗೂ ಶುಭಾಶಯಗಳು.
21 November 2012
ಜಿಲ್ಲಾ ವಿಜ್ಞಾನ ಮೇಳದಲ್ಲಿ ಪ್ರಶಸ್ತಿ
20.11.2012 ರಂದು ಚಟ್ಟಂಚಾಲ್ನಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ವಿಜ್ಞಾನ ಮೇಳದ ಪ್ರೌಢಶಾಲಾ ವಿಭಾಗದ ‘ಸ್ಥಿರ ಮಾದರಿ’ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಲ್ಲಿಕೋಟೆಯಲ್ಲಿ ಜರಗಲಿರುವ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸ್ವಾಗತ ರೈ. ಬಿ ಮತ್ತು ಅಭಿಲಾಶ್ ಶರ್ಮ. ಕೆ ಅರ್ಹತೆ ಪಡೆದಿದ್ದಾರೆ. ಸ್ವಾಗತ ರೈ - ಶಿಕ್ಷಕ ದಂಪತಿಯರಾದ ಚಂದ್ರಶೇಖರ ರೈ. ಕೆ ಮತ್ತು ಚಂದ್ರಾವತಿ. ಬಿ ಇವರ ಸುಪುತ್ರಿ. ಅಭಿಲಾಶ್ ಶರ್ಮ.ಕೆ - ಹಿರಿಯ ಪತ್ರಕರ್ತ ಶಂಕರನಾರಾಯಣ ಕಿದೂರು ಮತ್ತು ಕೃಷ್ಣವೇಣಿ ಕಿದೂರು ಇವರ ಪುತ್ರ.
17 November 2012
ಮಾದಕ ದ್ರವ್ಯ ವಿರುದ್ಧ ಜಾಗೃತಿ
ಇಂದು ಅರಾಹ್ನ ನಮ್ಮ ಶಾಲೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳಾದ ಸತೀಶ್ ಬಲ್ಲಾಳ್ ಮತ್ತು ಮದನನ್ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯ ಉಪಯೋಗದ ವಿರುದ್ಧ ಜಾಗೃತಿ ತರಗತಿಯನ್ನು ನಡೆಸಿದರು. ಶಾಲಾ ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಶಿಕ್ಷಕ ಕೆ. ಶಂಕರನಾರಾಯಣ ಶರ್ಮ ಧನ್ಯವಾದ ಸಮರ್ಪಿಸಿದರು. ಹಿರಿಯ ಶಿಕ್ಷಕಿ ಭುವನೇಶ್ವರಿ. ಎ ಕಾರ್ಯಕ್ರಮ ನಿರೂಪಿಸಿದರು.
ಗ್ಲಾಸ್ ಪೈಂಟಿಂಗ್ ಮತ್ತು ಭಾವಗೀತೆ ಗಾಯನ ತರಬೇತಿ
ಮೊನ್ನೆ 13.11.2012 ದೀಪಾವಳ ಹಬ್ಬದ ರಜೆಯ ದಿನ, ನಮ್ಮ ಶಾಲಾ ಆಕ್ತ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಎರಡು ವಿಭಿನ್ನ ಕಾರ್ಯಕ್ರಮಗಳನ್ನು ಶಾಲಾ ಆರ್ಟ್ಸ್ ಕ್ಲಬ್ ಆಯೋಜಿಸಿತು. ಉಪ್ಪಳ ಸರಕಾರಿ ಶಾಲಾ ಶಿಕ್ಷಕಿ ಶ್ರೀಮತಿ ಜ್ಯೋತಿ ಕುಮಾರಿ. ಪಿ.ವಿ ವಿದ್ಯಾರ್ಥಿಗಳಿಗೆ ಭಾವಗೀತ ಗಾಯನ ತರಬೆತಿ ನೀಡಿದರು. ಶಾಲಾ ಸಂಚಾಲಕ ಶ್ರೀ ಜಯದೇವ ಖಂಡಿಗೆ ಇವರ ಪುತ್ರಿ ಕುಮಾರಿ ಸಂಜೋತಾ ವಿದ್ಯಾರ್ಥಿಗಳಿಗೆ ಗ್ಲಾಸ್ ಪೈಂಟಿಂಗ್ ಮಾಡುವ ವಿಧಾನದ ತರಬೇತಿ ನೀಡಿದರು. ಧನ್ಯವಾದಗಳು ಅವರಿಗೆ...24 October 2012
19 October 2012
ಕಾಸರಗೋಡಿನಲ್ಲಿ ಕನ್ನಡ ಉಳಿದಿದೆ: ಪ್ರಕಾಶ್ ಮತ್ತಿಹಳ್ಳಿ
“ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿಯೇ ಕನ್ನಡ ದೂರವಾಗುತ್ತಿದೆ. ಬೆಂಗಳೂರಿನ ಜನಸಂಖ್ಯೆಯ ಕೇವಲ ೨೩ ಶೇಕಡಾ ಜನ ಮಾತ್ರ ಸದ್ಯ ಕನ್ನಡಿಗರಿದ್ದಾರೆ. ಆದರೆ ಕರ್ನಾಟಕದಲ್ಲಿರುವ ಕನ್ನಡಿಗರಿಗಿಂತಲೂ ಸುಲಲಿತವಾಗಿ ಕನ್ನಡ ಮಾತನಾಡುವ ಜನ ಈ ಗಡಿನಾಡಿನಲ್ಲಿದ್ದಾರೆ ಎಂಬುದನ್ನು ತಿಳಿದು ಸಂತಸವಾಗಿದೆ. ಕನ್ನಡದ ಬೆಳವಣಿಗೆಗಾಗಿ ಈ ನಾಡಿನ ಜನತೆಯ ಜೊತೆ ನಾವೂ ಕೈಜೋಡಿಸುತ್ತೇವೆ. ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರಾಯೋಜಿಸುವ ಧನ ಸಹಾಯದಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡದ ಕಾಮಗಾರಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾರ್ಯದರ್ಶಿ ಎಂ.ವಿ. ಮಹಾಲಿಂಗೇಶ್ವರ ಭಟ್, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಸ್ವಾಗತಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಧನ್ಯವಾದ ಸಮರ್ಪಿಸಿದರು. ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಕಾರ್ಯಕ್ರಮ ನಿರೂಪಿಸಿದರು.
17 October 2012
19ರಂದು ಗ್ರಂಥಾಲಯ ಕಟ್ಟಡ - ಕಾಮಗಾರಿ ಪರಿಶೀಲನಾ ಸಭೆ
ನಮ್ಮ ಪ್ರೌಢಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಧನ ಸಹಾಯದಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡದ ಕಾಮಗಾರಿ ಪರಿಶೀಲನಾ ಸಭೆಯು ೧೯.೧೦.೨೦೧೨ ಶುಕ್ರವಾರ ಮಧ್ಯಾಹ್ನ ೧೨ ಗಂಟೆಗೆ ಜರಗಲಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಚ್.ವಿ.ರಾಮಚಂದ್ರ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿಯವರು ಪರಿಶೀಲನಾ ವರದಿಯನ್ನು ಮಂಡಿಸುವರು. ಶಾಲಾ ಹಳೆ ವಿದ್ಯಾರ್ಥಿ ಕುಂಜಾರು ಸುಬ್ರಾಯ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಶುಭ ಹಾರೈಸಲಿದ್ದಾರೆ.
ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿಯವರು ಪರಿಶೀಲನಾ ವರದಿಯನ್ನು ಮಂಡಿಸುವರು. ಶಾಲಾ ಹಳೆ ವಿದ್ಯಾರ್ಥಿ ಕುಂಜಾರು ಸುಬ್ರಾಯ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಶುಭ ಹಾರೈಸಲಿದ್ದಾರೆ.
12 October 2012
Subscribe to:
Posts (Atom)
















